News & Events
ಆಗತ – ಸ್ವಾಗತ ಹಾಗೂ ಎಸ್.ಎಸ್.ಎಲ್.ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ 22.6.2022
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ – ಆಗತ – ಸ್ವಾಗತ ಹಾಗೂ ಎಸ್.ಎಸ್.ಎಲ್.ಸಿ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ೨೨/೬/೨೦೨೨ 2022-23 ಶೈಕ್ಷಣಿಕ ವರ್ಷಕ್ಕೆ ಹೊಸತಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ವಿಶೇಷ ವಿಜೃಂಭಣೆಯಿಂದ ಸ್ವಾಗತಿಸಲಾಯಿತು. ಗಣ್ಯ ಅತಿಥಿಗಳು ದೀಪ ಪ್ರಜ್ವಲನೆಮಾಡಿ ಘೃತಾಹುತಿಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ! ಪ್ರಭಾಕರ ಭಟ್ ಕಲ್ಲಡ್ಕ ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಶಾಲೆ
ಶ್ರೀರಾಮ ಸೆಕೆಂಡರಿ ಸ್ಕೂಲ್ ಆಂಗ್ಲ ಮಾಧ್ಯಮ ಇದರ ಆರಂಭೋತ್ಸವ
ಕಲ್ಲಡ್ಕ ಶ್ರೀರಾಮ ಸೆಕೆಂಡರಿ ಸ್ಕೂಲ್ ಆಂಗ್ಲ ಮಾಧ್ಯಮ ಇದರ ಆರಂಭೋತ್ಸವ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್, ಕಲ್ಲಡ್ಕ ಇವರು ದೀಪ ಬೆಳಗಿಸಿ, ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ ವಸಂತ ಮಾಧವ, ಸಹ ಸಂಚಾಲಕರಾದ ಶ್ರೀ ರಮೇಶ್ ಎನ್. ಉಪಪ್ರಾಂಶುಪಾಲರಾದ ಶ್ರೀ ತಿರುಮಲೇಶ್ವರ ಪ್ರಶಾಂತ್, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತಮ್ಮ ಪರಿಚಯ ಮಾಡಿಕೊಂಡು
ಶ್ರೀರಾಮ ವಿದ್ಯಾಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಮೈಸೂರು ಸೇಲ್ಸ್ ಇಂಟರ್ನ್ಯಾಶನಲ್ ಲಿಮಿಟೆಡ್ ಕಾಗದ ವಿಭಾಗದ ವತಿಯಿಂದ ವಿದ್ಯಾಕೇಂದ್ರದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ವಿತರಿಸಲಾಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಇವರು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ MSILನ ಶಾಖಾ ಮುಖ್ಯಸ್ಥರಾದ ಶ್ರೀ ಶುಭಕರ ಅಜ್ರಿ, ಮಂಗಳೂರು, ವಿದ್ಯಾಕೇಂದ್ರದ ಅಧ್ಯಕ್ಷರಾದ ಶ್ರೀ ನಾರಾಯಣ ಸೋಮಯಾಜಿ, ಸಂಚಾಲಕರಾದ ಶ್ರೀ ವಸಂತ ಮಾಧವ, ಹಾಗೂ ವಿಭಾಗ ಮುಖ್ಯಸ್ಥರು, ಶಿಕ್ಷಕರು
ಸೀತಾ ರಸೋಯಿ ಪಾಕಶಾಲಾ ಸಮುಚ್ಚಯ ಉದ್ಘಾಟನೆ 9.4.2022
ಶ್ರೀರಾಮ ವಿದ್ಯಾಕೇಂದ್ರದ ಕಲ್ಲಡ್ಕದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಇದರ ಸಹಕಾರದಿಂದ ನೂತನವಾಗಿ ನಿರ್ಮಿಸಿದ ಪಾಕಶಾಲಾ ಸಮುಚ್ಚಯ ಇಂದು ಉದ್ಘಾಟನೆಗೊಂಡಿತು. ಎರಡು ಭೋಜನಾಲಯ, ಒಂದು ಅಡುಗೆ ಶಾಲೆ ಹಾಗೂ ಕಚೇರಿ, ಉಗ್ರಾಣವನ್ನೊಳಗೊಂಡ ೪ ಮಹಡಿಯುಳ್ಳ ಕಟ್ಟಡವಾಗಿದೆ. ಇಲ್ಲಿ ೫೦೦೦ಜನರಿಗೆ ಏಕಕಾಲದಲ್ಲಿ ಅಡುಗೆ ಸಿದ್ಧಪಡಿಸಬಹುದಾಗಿದೆ. ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ, ಅತಿಥಿಗಳು ಗಂಟೆ ಬಾರಿಸಿದಾಗ ಮುಖ್ಯ ದ್ವಾರದ ಪರದೆ ಪಕ್ಕಕ್ಕೆ ಸರಿಯುವ ಮೂಲಕ ಕಟ್ಟಡವು ಉದ್ಘಾಟನೆಗೊಂಡಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾಕೇಂದ್ರದ ಸಂಚಾಲಕರು
ರಾಷ್ಟ್ರೀಯ ವಿಜ್ಞಾನ ದಿನಾಚರಣೆ – ಪರಿಸರವನ್ನು ಪ್ರೀತಿಸಬೇಕು- ಪದ್ಮಶ್ರೀ ಶ್ರೀ ಅಮೈ ಮಹಾಲಿಂಗ ನಾಯ್ಕ
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ಭಾರತೀಯ ಭೌತಶಾಸ್ತ್ರಜ್ಞ ಸರ್ ಸಿ.ವಿ ರಾಮನ್ರವರು ಆವಿಷ್ಕರಿಸಿದ ರಾಮನ್ ಪ್ರಭಾವದ ದಿನವನ್ನು ಗುರುತಿಸುವ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಒಂದು ವಾರಗಳ ಕಾಲ ಜ್ಞಾನಧಾರ ಸಪ್ತಾಹ ಎಂಬ ಕಾರ್ಯಕ್ರಮದಡಿಯಲ್ಲಿ ನಡೆಸಿ ದಿನಾಂಕ 28.02.2022 ರಂದು ಸಮಾರೋಪ ಕಾರ್ಯಕ್ರಮ ನಡೆಸಲಾಯಿತು. ಬಂದತಂಹ ಅಥಿತಿಗಳಿಗೆ ಅಡಿಕೆ ಗಿಡಗಳನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಪದ್ಮಶ್ರೀ ಅಮೈ ಮಹಾಲಿಂಗ ನಾಯ್ಕರವರನ್ನು ಗೌರವಿಸಲಾಯಿತು. ಪದ್ಮಶ್ರೀ
ವಿದ್ಯಾಭಾರತಿ ಅ.ಭಾ ಸಂಘಟನಾ ಕಾರ್ಯದರ್ಶಿ ಶ್ರೀ ಕಾಶಿಪತಿ ಇವರು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ
ವಿದ್ಯಾಭಾರತಿ ಅ.ಭಾ ಸಂಘಟನಾ ಕಾರ್ಯದರ್ಶಿ ಶ್ರೀ ಕಾಶಿಪತಿ ಇವರು ದಿನಾಂಕ 16.02.2022ರಂದು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿ, ವಿದ್ಯಾಕೇಂದ್ರದ ಬೋಧಕ ಸಿಬ್ಬಂದಿಯವರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿದರು. ಮರುದಿನ ಶ್ರೀರಾಮ ಪ್ರೌಢಶಾಲೆಯ ಸರಸ್ವತಿ ವಂದನ ಸಭಾದಲ್ಲಿ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾಗಿ ದೇಶಕ್ಕೆ ವಿಜಯ ತಂದ ಸಾಹಸಿ ವೀರ ಪರಾಕ್ರಮಿಯಾದ ವಿಕ್ರಂ ಭಾದ್ರ ಇವರ ಕಥೆಯನ್ನು ಹೇಳಿ ರೋಮಾಂಚನಗೊಳಿಸಿದರು. ಬಳಿಕ ಶಿಶುಮಂದಿರ, ಪ್ರಾಥಮಿಕ ಶಾಲಾ ಮಕ್ಕಳ ಚಟುವಟಿಕೆಗಳನ್ನು ವೀಕ್ಷಣೆ ಮಾಡಿ ಶಿಕ್ಷಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ
‘ಕೆಡ್ಡಸ’ ಎಂಬುದು ಮನನ ಮಾಡಿಕೊಳ್ಳುವ ಆಚರಣೆಯಾಗಬೇಕೇ ಹೊರತು, ಮರೆತು ಹೋಗುತ್ತಿರುವ ಆಚರಣೆಯಾಗಬಾರದು
ದಿನಾಂಕ 12.02.2022ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಡ್ಡಸ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ತುಳಸಿಕಟ್ಟೆಯ ಮುಂದೆ ಗೋಮಯದಿಂದ ಶುದ್ಧೀಕರಿಸಿ, ವಿಭೂತಿಯಿಂದ ಅಗಲವಾದ ವೃತ್ತವನ್ನು ರಚಿಸಿ, ಭೂಮಿ ದೇವಿಯ ಸಾನಿಧ್ಯ ರಚಿಸಿ, ದೀಪಹಚ್ಚಿ, ಮಣೆಯ ಮೇಲೆ ಎಣ್ಣೆ, ಸೀಗೆಕಾಯಿ, ಅರಶಿನ- ಕುಂಕುಮ, ಪಚ್ಚೆ ಹಸಿರಿನ ಹುಡಿ, ವೀಳ್ಯೆದೆಲೆ ಇತ್ಯಾದಿಗಳನ್ನು ಭೂಮಿ ದೇವಿಯ ಸ್ನಾನಕ್ಕೋಸ್ಕರ ಇಟ್ಟು ಹುರುಳಿ, ಹೆಸರು ಕಾಳು, ಒಣಕೊಬ್ಬರಿ, ಕಡಲೆಕಾಯಿಗಳ ಮಿಶ್ರಣ(ನನ್ನೇರಿ) ಇದರೊಂದಿಗೆ ತುಳುನಾಡಿನ ವಿವಿಧ ಭಕ್ಷ್ಯಗಳನ್ನು(ಸಾರ್ನಡ್ಡೆ) ಊರಿನ ಹಿರಿಯ ತಾಯಿಯಾದ ಜಯಂತಿಯವರು ಭೂಮಿಗೆ
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 73ನೇ ಗಣರಾಜ್ಯೋತ್ಸವ
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಪ್ರೌಢ ಶಾಲೆಯ ಹಿರಿಯ ವಿದ್ಯಾರ್ಥಿ, ಕಾಂಪ್ರಬೈಲ್ ಶ್ರೀ ಉಳ್ಳಾಲ್ತಿ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ಜಯಾನಂದ ಆಚಾರ್ಯ ಧ್ವಜಾರೋಹಣ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೌಢ ಶಾಲೆಯ ಎನ್.ಸಿ.ಸಿ ವಿದ್ಯಾರ್ಥಿಗಳು ಘೋಷ್ ವಾದನದೊಂದಿಗೆ ಪಥಸಂಚಲನ ನಡೆಸಿದರು. ನಂತರ ಪ್ರೌಢಶಾಲೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಡಾ. ಬಿ.ಆರ್. ಅಂಬೇಡ್ಕರ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಬಳಿಕ ಪದವಿ ಕಾಲೇಜಿನ ಪ್ರಾಧ್ಯಾಪಕರಾದ ಯತಿರಾಜ್ ಪೆರಾಜೆ ಮಾತನಾಡುತ್ತಾ ಇಂದು ಜಯಂತಿ, ಉತ್ಸವಗಳ ಆಚರಣೆ ನಾಟಕೀಯವಾಗಿದ್ದು,