News & Events
ಭಜನೆಯೇ ನನ್ನ ಯಶಸ್ಸಿನ ಹಿಂದಿನ ರಹಸ್ಯ ಕಲ್ಲಡ್ಕದ ಆಜಾದಿ ಪರ್ವ ಸಮಾರೋಪ ಸಮಾರಂಭದಲ್ಲಿ ಖ್ಯಾತ ಗಾಯಕ ಸಂದೇಶ್ ನೀರುಮಾರ್ಗ
ಜ: ೧೪, ಕಲ್ಲಡ್ಕದ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ದ.ಕ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ನಡೆದ ?ಆಜಾದಿ ಪರ್ವ? ಹೆಸರಿನ ಅಂತರ್ಕಾಲೇಜು ಫೆಸ್ಟ್ನ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಲರ್ಸ್ ಕನ್ನಡ “ಎದೆ ತುಂಬಿ ಹಾಡುವೆನು “ಖ್ಯಾತಿಯ ಶ್ರೀ ಸಂದೇಶ್ ನೀರುಮಾರ್ಗ ಮಾತನಾಡುತ್ತಾ, ?ಬಾಲ್ಯದಿಂದಲೂ ಭಜನೆಯಲ್ಲಿ ಅತೀವ ಆಸಕ್ತಿ ಇದ್ದ ನನಗೆ ಇಂದು ಅದುವೇ ಮೆಟ್ಟಿಲಾಗಿ ಎತ್ತರಕ್ಕೆ ಕರೆದೊಯ್ದಿದೆ. ಎಸ್. ಪಿ. ಬಾಲಸುಬ್ರಹ್ಮಣ್ಯರಂತಹ ಶ್ರೇಷ್ಟ ಗಾಯಕರು ರಚಿಸಿದ
vivekananda jayanthi
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿ ವಿವೇಕಾನಂದ ಜಯಂತಿ ಅಂಗವಾಗಿ ವಿವೇಕಾಮೃತ ಸಿಂಚನ ಕಾರ್ಯಕ್ರಮವು ನಡೆಯಿತು. ವಿವೇಕಾನಂದರ ವೇಷಧರಿಸಿದ ವಿದ್ಯಾರ್ಥಿಗಳು ವಿವೇಕವಾಣಿ ಉದ್ಘೋಷಿಸಿದರು. ಕಾರ್ಯಕ್ರಮದಲ್ಲಿ ಡಿವೈನ್ ಪಾರ್ಕ್ ಸಾಲಿಗ್ರಾಮ ಉಡುಪಿ ಇದರ ಮಹಿಳಾ ಮೇಲ್ವಿಚಾರಣಾ ಅಧಿಕಾರಿ ಪ್ರೇಮ ಪ್ರಭಾಕರ್, ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಮತ್ತು ವಿವೇಕಾನಂದರ ಆಧ್ಯಾತ್ಮಿಕ ಜೀವನ, ವೈಜ್ಞಾನಿಕ ಚಿಂತನೆ,ದೇಶ, ಧರ್ಮ ಯುವಜನಾಂಗದ ಬಗ್ಗೆ ಅವರ ಕಾಳಜಿ,ಬಡತನ ನಿರ್ಮೂಲನೆಗಾಗಿ ಅವರ ಶ್ರಮ ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ
‘ಶ್ರೀರಾಮ ಸರ್ವಿಸ್ ಸ್ಟೇಷನ್ ಉದ್ಘಾಟನೆ
ಶ್ರೀರಾಮ ವಿದ್ಯಾಕೇಂದ್ರದ ಶಾಲಾ ವಾಹನ ಶಾಲಾ ವಾಹನಗಳನ್ನು ಯಂತ್ರಗಳ ಸಹಾಯದಿಂದ ಸ್ವಚ್ಛಗೊಳಿಸಲು ‘ಶ್ರೀರಾಮ ಸರ್ವಿಸ್ ಸ್ಟೇಷನ’ನ್ನು ಪ್ರಾರಂಭಿಸಲಾಗಿದೆ. ಸಂಸ್ಥೆಯ ಹಿರಿಯರಾದ ಡಾ ಪ್ರಭಾಕರ ಭಟ್ ಕಲ್ಲಡ್ಕ ಇವರು ತೆಂಗಿನಕಾಯಿ ಒಡೆಯುವ ಮೂಲಕ ಹಾಗೂ ಯಂತ್ರವನ್ನು ಚಾಲನೆ ಮಾಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಚಾಲಕರಾದ ಶ್ರೀ ವಸಂತಮಾಧವ, ಸಹ ಸಂಚಾಲಕರಾದ ಶ್ರೀ ರಮೇಶ ಎನ್. ವಿವಿಧ ವಿಭಾಗಗಳ ಪ್ರಮುಖರು ಹಾಗೂ ಶಾಲಾ ವಾಹನದ ಪ್ರಮುಖರಾದ ಮತ್ತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ರವಿರಾಜ್ ಕಣಂತೂರು ಮತ್ತು
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೦ನೇ ವರ್ಷದ ನವದಂಪತಿ ಸಮಾವೇಶ
ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ೨೦ನೇ ವರ್ಷದ ನವದಂಪತಿ ಸಮಾವೇಶ ೧೯.೧೨.೨೦೨೧ ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ಹಿರಿಯ ದಂಪತಿಗಳಾಗಿ ಭಾಗವಹಿಸಿದ ಕೃಷ್ಣಪ್ಪ ಹಾಗೂ ರಾಮಕ್ಕ ಅವರು ನವದಂಪತಿ ಸಮಾವೇಶವನ್ನು ಉದ್ಘಾಟಿಸಿ, ತಾವು ವೈವಾಹಿಕ ಜೀವನದಲ್ಲಿ ನಡೆದು ಬಂದ ಜೀವನದ ಅನುಭವವನ್ನು ನವದಂಪತಿಗಳಲ್ಲಿ ಹಂಚಿಕೊಂಡರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ||ಪ್ರಭಾಕರ ಭಟ್ ಕಲ್ಲಡ್ಕ ಪ್ರಾಸ್ತಾವಿಕ